Shubhashaya News

’ಕೇವಲ ಹಿಂದುಳಿದ ವರ್ಗಕ್ಕೆ ಸೇರಿದರೆ ಸಾಲದು, ಅರ್ಹತೆಯೂ ಬೇಕು’: ಸರ್ಕಾರಿ ಕೆಲಸದಲ್ಲಿ ರಿಯಾಯಿತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಸರ್ಕಾರಿ ಉದ್ಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿರುವುದು ಎಂಬ ಕಾರಣವೊಂದೇ ಅಭ್ಯರ್ಥಿಗಳಿಗೆ ವಿಶೇಷ ಸವಲತ್ತು ಅಥವಾ ರಿಯಾಯಿತಿ ನೀಡಲು ಆಧಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನೇಮಕಾತಿಯ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರಿಗೂ ಕಡ್ಡಾಯ ಎಂದು ನ್ಯಾಯಾಲಯ ಹೇಳಿದೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳು ನಿಗದಿತ ಶೈಕ್ಷಣಿಕ ಅರ್ಹತೆ ಅಥವಾ ನೇಮಕಾತಿ ಮಾನದಂಡಗಳನ್ನು ಪೂರೈಸದಿದ್ದರೆ, ಕೇವಲ ಅವರ ಸಾಮಾಜಿಕ ಹಿನ್ನೆಲೆಯನ್ನು ಪರಿಗಣಿಸಿ ಕೆಲಸ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳ ಪೀಠ ತಿಳಿಸಿದೆ.

 “ಒಂದು ಉದ್ಯೋಗಕ್ಕೆ ಪರೀಕ್ಷೆ ಅಥವಾ ಸಂದರ್ಶನದಲ್ಲಿ ಕನಿಷ್ಠ ಅಂಕಗಳನ್ನು ನಿಗದಿಪಡಿಸಿದ್ದರೆ, ಆ ಮಿತಿಯನ್ನು ತಲುಪದ ಅಭ್ಯರ್ಥಿಗಳನ್ನು ಹಿಂದುಳಿದವರು ಎಂಬ ಕಾರಣಕ್ಕೆ ಆಯ್ಕೆ ಮಾಡುವುದು ಸಮಾನತೆಯ ತತ್ವಕ್ಕೆ ವಿರುದ್ಧವಾಗುತ್ತದೆ,” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಸರ್ಕಾರಿ ಕೆಲಸಗಳಲ್ಲಿ ದಕ್ಷತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಮುಖ್ಯ. ಮೀಸಲಾತಿಯು ಪ್ರಾತಿನಿಧ್ಯ ನೀಡುವುದಕ್ಕಾಗಿದೆಯೇ ಹೊರತು, ಕನಿಷ್ಠ ಅರ್ಹತೆಯನ್ನೇ ಕಡೆಗಣಿಸುವುದಕ್ಕಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಯೊಬ್ಬರು ತಾನು ಹಿಂದುಳಿದ ವರ್ಗಕ್ಕೆ ಸೇರಿದವನಾಗಿದ್ದು, ತನಗೆ ನೇಮಕಾತಿಯಲ್ಲಿ ಸಡಿಲಿಕೆ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ನ್ಯಾಯಾಲಯ ಈ ಮೌಖಿಕ ವೀಕ್ಷಣೆ ಮಾಡಿದೆ.

Comments are closed.

Don`t copy text!