Shubhashaya News

ಬಿಜೆಪಿ ಗೆಲುವು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತದಾರರು ಅಭೂತಪೂರ್ವ ಬೆಂಬಲ ನೀಡಿರುವುದಕ್ಕೆ ಆಳಂದ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಬಗ್ಗೆ ಜನ ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ ಅಲ್ಲದೇ ಜನ ಯಾವತ್ತೂ ಅಭಿವೃದ್ಧಿ ರಾಜಕಾರಣವನ್ನು ಬಯಸುತ್ತಾರೆ ಎನ್ನುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ದುರಾಡಳಿತ ಕೊನೆಗೊಂಡಿದೆ. ಅಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಕಂಡಿದೆ. ಅಸ್ಸಾಂನಲ್ಲಿ ಎಲ್ಲರ ಲೆಕ್ಕಾಚಾರ ತಲೆ ಕೆಳಗೆ ಮಾಡಿ ಸತತ ಎರಡನೇ ಬಾರಿ ಅಧಿಕಾರ ಹಿಡಿಯುವ ಮೂಲಕ ಬಿಜೆಪಿ ಜನರ ವಿಶ್ವಾಸ ವೃದ್ಧಿಸಿಕೊಂಡಿದೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದಾದ್ಯಂತ ಡಬಲ್ ಇಂಜಿನ್ ಸರ್ಕಾರಗಳು ಗೆಲ್ಲುತ್ತಿವೆ. ಈ ಫಲಿತಾಂಶ ಮುಂಬರುವ ರಾಜ್ಯಗಳ ಫಲಿತಾಂಶದ ಮೇಲೂ ಪರಿಣಾಮ ಬೀರಲಿದೆ. ಮತದಾರರು ಪ್ರತಿಪಕ್ಷಗಳ ತುಷ್ಟೀಕರಣ ರಾಜಕಾರಣಕ್ಕಿಂತ ಬಿಜೆಪಿಯ ಅಭಿವೃದ್ಧಿ ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಇಟ್ಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಉಪಚುನಾವಣೆಯ ಸೋಲಿನ ಬಗ್ಗೆ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುವುದು ಹಾಗೂ ಸೋಲಿನ ಬಗ್ಗೆ ಪರಾಮರ್ಶೆ ಮಾಡಲಾಗುವುದು ಎಂದಿದ್ದಾರೆ.

Comments are closed.

Don`t copy text!