Shubhashaya News

ಮೇ.21 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ

ಕರ್ನಾಟಕ ಸರ್ಕಾರದ ಸಚಿವ ಸಂಪುಟದ 2026ನೇ ಸಾಲಿನ 13ನೇ ಸಭೆಯನ್ನು ಮೇ 21ರಂದು ಕರೆಯಲಾಗಿದೆ. ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಈ ಕುರಿತು ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.

ಸಭೆಯ ಪ್ರಮುಖ ವಿವರಗಳು:

ದಿನಾಂಕ: 21.05.2026, ಗುರುವಾರ

ಸಮಯ: ಸಂಜೆ 4:00 ಗಂಟೆಗೆ

ಸ್ಥಳ: ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರ

ಈ ಸಭೆಯು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಉಪ ಮುಖ್ಯಮಂತ್ರಿಗಳು ಹಾಗೂ ಸಂಪುಟದ ಎಲ್ಲಾ ಸಚಿವರು ಭಾಗವಹಿಸಲಿದ್ದಾರೆ. ಸಭೆಯ ಕಾರ್ಯಸೂಚಿಯನ್ನು (Agenda) ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಭೆಯ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಲಾಗಿದೆ. ಅಲ್ಲದೆ, ವಿಧಾನಸೌಧದ ಭದ್ರತೆ, ತೋಟಗಾರಿಕೆ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೂ ಸಭೆಯ ಸಿದ್ಧತೆಗಾಗಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಈ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Comments are closed.

Don`t copy text!