ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗಿರುವ ಡಾ. ಮಲ್ಲಿಕಾರ್ಜುನ್ ಖರ್ಗೆಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಇದೀಗ ಕೇಂದ್ರ ಸರ್ಕಾರ ಜೆಡ್ (Z) ಪ್ಲಸ್ ಸೆಕ್ಯೂರಿಟಿ ಭದ್ರತೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ.
ಹೌದು, ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎನ್ನಲಾಗಿದೆ. ಆ ಕಾರಣಕ್ಕೆ Z+ ಸೆಕ್ಯುರಿಟಿ ನೀಡಲಾಗಿದೆ ಎಂದು ತಿಳಿದುಬಂದಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ದಿನದಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ Z+ ಸೆಕ್ಯುರಿಟಿ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಭದ್ರತಾ ಸಿಬ್ಬಂದಿ ಜೊತೆಗೆ ಸಿಆರ್ ಪಿಎಫ್ Z+ ಸೆಕ್ಯುರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ ಸಿಆರ್ ಪಿಎಫ್ ಗನ್ ಮ್ಯಾನ್ ಗಳ ನಿಯೋಜನೆ ಮಾಡಲಾಗಿದೆ.
Comments are closed.