ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಾ? ನಿಮ್ಮ ಬ್ಯಾಂಕ್ ಖಾತೆಗೆ 7 ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
ಹೌದು, ಓದುಗರೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಯಲ್ಲಿ ಒಂದಾಗಿದೆ. ಅದೆರಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದೆ. ಕರ್ನಾಟಕ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು 2023 ರ ಆಗಸ್ಟ್ 30 ರಿಂದ ಅನುಷ್ಠಾಣಕ್ಕೆ ತರಲಾಗಿದ್ದು ಇಲ್ಲಿ ತನಕ ಅರ್ಹರಿಗೆ ಆರು ಕಂತುಗಳ ತನಕ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ನಡುವೆ ಹಲವು ಮಂದಿ ಏಳನೇ ಕಂತಿಗಾಗಿ ಕಾಯುತ್ತಿದ್ದಾರೆ. ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ 2ನೇ ಅಥವಾ 3ನೇ ವಾರದಲ್ಲಿ ಗೃಹಲಕ್ಷ್ಮೀಯರ ಖಾತೆಗಳಿಗೆ GruhaLakshmi DBT ಮೂಲಕ ವರ್ಗಾವಣೆ ಯಾಗಲಿದೆ ಎನ್ನಲಾಗಿದೆ.
Comments are closed.