ನೋಡ್ತಾ ಇರಿ ನಾನು 2028ಕ್ಕೆ ಮುಖ್ಯಮಂತ್ರಿ ಆಗ್ತೀನಿ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಭವಿಷ್ಯ ನುಡಿದ್ದಾರೆ.
ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ಧಾಳಿ ನಡೆಸಿದರು.
ಈ ಹಿಂದೆ ಬಸವರಾಜ ಬೊಮ್ಮಾಯಿ ಮಂತ್ರಿ ಆಗಿ ಅಂತ ಹೇಳಿದ್ದರು. ಆಗ ನಾನು ಅಭಿವೃದ್ಧಿಗೆ ಹಣ ಕೊಡಿ ಮಂತ್ರಿಗಿರಿ ಬೇಡ ಎಂಬುದಾಗಿ ಹೇಳಿದ್ದೆ. ಕಾರಿನ ಮೇಲೆ ಕೆಂಪು ಗೂಡ ಹಾಕಿಕೊಂಡು ಓಡಾಡುವ ಶೋಕಿ ನನಗೆ ಇಲ್ಲ ಎಂಬುದಾಗಿ ತಿಳಿಸಿದರು.
ನಾನು ಪಕ್ಷಕ್ಕೆ ವಾಪಾಸ್ ಸೇರಿಸಿಕೊಳ್ಳಿ ಎಂದು ಕೈಮುಗಿಯುವುದಿಲ್ಲ. ನೋಡ್ತಾ ಇರಿ ನಾನು 2028ಕ್ಕೆ ಮುಖ್ಯಮಂತ್ರಿ ಆಗುತ್ತೇವೆ ಎಂಬುದಾಗಿ ತಿಳಿಳಿಸಿದರು.