ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಇಂದು ಸಂಜೆ 5.30ಕ್ಕೆ ಮಹತ್ವದ ಸುದ್ದಿಗೋಷ್ಠಿಯಲ್ಲಿ ಸೇನಾ ಕಾರ್ಯಾಚರಣೆಯ ಬಗ್ಗೆ ಮಾಹಿತಿಯನ್ನು ನೀಡಲಿದೆ.
ಇಂದು ಸಂಜೆ 5.30ಕ್ಕೆ ಕೇಂದ್ರ ಗೃಹ ಸಚಿವಲಾಯ ಉನ್ನತ ಅಧಿಕಾರಿಗಳು ಈ ಸುದ್ದಿಗೋಷ್ಠಿಯನ್ನು ನಡೆಸಲಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಕುರಿತಂತೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಇದಷ್ಟೇ ಅಲ್ಲದೇ ನಿನ್ನೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದಂತ ಡ್ರೋನ್ ಹಾಗೂ ಕ್ಷಿಪಣಿ ದಾಳಿಯ ಹಾನಿ, ಪ್ರತ್ಯುತ್ತರದ ದಾಳಿಯ ಬಗ್ಗೆಯೂ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಲಿದ್ದಾರೆ.
Comments are closed.