Shubhashaya News

ಜು.17ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

 ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜುಲೈ.17ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 17-07-2025ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 15ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಜುಲೈ.17ರಂದು ನಿಗದಿಯಾಗಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ.

Comments are closed.

Don`t copy text!