Shubhashaya News

3 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಗುತ್ತೇದಾರ ಗುದ್ದಲಿ ಪೂಜೆ

ಆಳಂದ ಪಟ್ಟಣದಿಂದ ಕೊರಳ್ಳಿ ಕ್ರಾಸ್ ಮೂಲಕ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಗುದ್ದಲಿ ಪೂಜೆ ನೇರವೇರಿಸಿದರು.

ಇತ್ತೀಚೆಗೆ ಕೊರಳ್ಳಿ ಕ್ರಾಸ್‍ನಿಂದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯವರೆಗಿನ 3 ಕೀ.ಮೀ ಉದ್ದದ 3 ಕೋ. ರೂ. ವೆಚ್ಚದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೊರಳ್ಳಿ ಕ್ರಾಸ್ ಹತ್ತಿರ ಸರ್ಕಾರದ ಬೇಕಾದಷ್ಟು ಜಮೀನಿದೆ ಮುಂದೆ ಬರಲಿರುವ ಹಲವಾರು ಯೋಜನೆಗಳು ಇಲ್ಲಿಯೇ ಆರಂಭವಾಗುತ್ತವೆ ಭವಿಷ್ಯದ ದೃಷ್ಟಿಯಿಂದ ಈ ಸ್ಥಳಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಅದ್ಯತೆಯಾಗಿದೆ ಈ ನಿಟ್ಟಿನಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಈ ಪ್ರದೇಶವು ಭೂಸನೂರ ಸಹಕಾರಿ ಸಕ್ಕರೆ ಕಾರ್ಖಾನೆ, ಮೋರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಸೇರಿದಂತೆ ಹಲವಾರು ಶೈಕ್ಷಣಿಕ ಸಂಸ್ಥೆಗಳಿಗೆ ಸಂಪರ್ಕ ಕಲ್ಪಿಸುತ್ತದೆ ಈ ರಸ್ತೆಯ ನಿರ್ಮಾಣದಿಂದ ಆಳಂದ ಪಟ್ಟಣಕ್ಕೆ ಹೋಗಿ ಬರಲು ಸರಳವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಗುತ್ತೇದಾರ, ರಾಜಶೇಖರ ಮಲಶೆಟ್ಟಿ, ಮಲ್ಲಿಕಾರ್ಜುನ ಕಂದಗೂಳೆ, ಪುರಸಭೆ ಉಪಾಧ್ಯಕ್ಷ ಚಂದ್ರಕಾಂತ ಹತ್ತರಕಿ ಸೇರಿದಂತೆ ಇತರರು ಇದ್ದರು.

Comments are closed.

Don`t copy text!