Shubhashaya News

BREAKING : ಅತ್ಯಾಚಾರ ಕೇಸ್ ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು: ಕಣ್ಣೀರು ಹಾಕಿದ ಪ್ರಜ್ವಲ್ ರೇವಣ್ಣ.!

: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ಸಂಬಂಧ ಇಂದು ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ವಾದ ಪ್ರತಿ ವಾದವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತ್ತು. ಇದೀಗ ಈ ಪ್ರಕರಣದಲ್ಲಿ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.

ಕೋರ್ಟ್ ನಲ್ಲಿ ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದಾರೆ. ಬಳಿಕ ಕಣ್ಣೀರು ಒರೆಸಿಕೊಂಡು ಪೊಲೀಸರೊಂದಿಗೆ ಕೋರ್ಟ್ ನಿಂದ ಹೊರಗೆ ನಡೆದಿದ್ದಾರೆ.

 

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿವೆ. ಇವುಗಳಲ್ಲಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಜ್ವಲ್ ಪ್ರಕರಣದಲ್ಲಿ ಪ್ರಕಟವಾಗಿರುವ ಮೊದಲ ತೀರ್ಪು ಇದಾಗಿದೆ.

Comments are closed.

Don`t copy text!