Shubhashaya News

ನರೇಗಾ ಯೋಜನೆ ಹಾಗೂ ಕೋವಿಡ್ ಲಸಿಕೆ ಕುರಿತು ಮಾಹಿತಿ ಕಾರ್ಯಗಾರ

ಔರಾದ ತಾಲೂಕಿನ ಸುಂದಾಳ ಗ್ರಾಮಪಂಚಾಯತ್ ವ್ಯಾಪ್ತಿಯ ಯನಗುಂದಾ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ  ಸೋಮವಾರ ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ರಿಲಯನ್ಸ್ ಫೌಂಡೇಶನ್ ಬೀದರ್ ಸಹಯೋಗದಲ್ಲಿ ನರೇಗಾ ಯೋಜನೆ ಹಾಗೂ ಕೋವಿಡ್ ಲಸಿಕೆ ಕುರಿತು ಮಾಹಿತಿ ಕಾರ್ಯಗಾರ ಜರುಗಿತು . ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ ,ರಿಲಯನ್ಸ್ ಸಮುದಾಯ ಸಂಪನ್ಮೂಲ ವ್ಯಕ್ತಿ ಬಾಲಾಜಿ ಮೇತ್ರಿ , ಬಂಡೆಪ್ಪ ,ಬಸವರಾಜ್ ಘುಳೆ ಇನ್ನಿತರರು ಇದ್ದರು .

ಔರಾದ:  ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಜಿಸುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ  ಯನ್ನು ಜಾರಿಗೊಳಿಸುವುದು ಮತ್ತು ಉಸ್ತುವಾರಿ ಗ್ರಾಮೀಣಾಭಿವೃದ್ದಿ ಆಯುಕ್ತಾಲಯ ಹಾಗೂ ಗ್ರಾಮ ಪಂಚಾಯ್ತಿ ಜವಾಬ್ದಾರಿಯಾಗಿದೆ.ಕೂಲಿ ಉದ್ಯೋಗದ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆಗಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗೀದ್ದು,ಕರೋನಾದಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮದ ಕೂಲಿ ಕಾರ್ಮಿಕರು  ಯಾವುದೇ ನಗರಗಳಿಗೆ ವಲಸೆ ಹೋಗದೆ ಉತ್ತಮ ಗ್ರಾಮ ಮಟ್ಟದಲ್ಲಿಯೇ ದಿನಗೂಲಿ ಕೆಲಸವನ್ನು ಮಾಡಿ ಸಮೃದ್ಧಿ ಜೀವನ ನಡೆಸಬೇಕು ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ ಹೇಳಿದರು .
ಸೋಮವಾರ ಅವರು ಯನಗುಂದಾ ಗ್ರಾಮದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಹಾಗೂ ರಿಲಯನ್ಸ್ ಫೌಂಡೇಶನ್ ಬೀದರ್ ಸಹಯೋಗದಲ್ಲಿ ನರೇಗಾ ಕಾಮಗಾರಿ ಹಾಗೂ ಕೋವಿಡ ಲಸಿಕೆ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು   ದೈಹಿಕ ಕೆಲಸ ಮಾಡಲು ಇಚ್ಛಿಸುವ ಗ್ರಾಮೀಣ ಪ್ರದೇಶದ ವಯಸ್ಕರಿಗೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ ನೂರು ದಿನಗಳ ಉದ್ಯೋಗಾವಕಾಶಗಳನ್ನು ಸ್ಥಳೀಯವಾಗಿ ನೀಡಿ, ಬಡಜನರ ಬದುಕನ್ನು ಹಸನಾಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಡಜನರನ್ನು ತೊಡಗಿಸಿಕೊಂಡು ಕೃಷಿ ಕಾರ್ಮಿಕರಿಗೆ ಕೂಲಿ ನೀಡುವ ಉದ್ಯೋಗ, ಆಹಾರಭದ್ರತೆ, ದೀರ್ಘಕಾಲ ಬಾಳಿಕೆ ಬರುವಂತಹ ಸ್ವತ್ತುಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ಕೈಗೊಳ್ಳಲಾಗುತ್ತಿದ್ದು,ಎಲ್ಲರೂ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡಿ ಸಮೃದ್ಧ ಬದುಕು ಸಾಗಿಸಬೇಕು ಎಂದರು .
ರಿಲಯನ್ಸ್ ಸಮುದಾಯ ಸಂಪನ್ಮೂಲ ವ್ಯಕ್ತಿ ಬಾಲಾಜಿ ಮೇತ್ರೆ ಮಾತನಾಡಿ ,ಮಹಾ ಮಾರಿ ಕರೋನ ತನ್ನ ಎರಡನೆಯ ಅಲೆಯನ್ನು ವ್ಯಾಪಕವಾಗಿ ಪಸರಿಸಿರುವ ಹಿನ್ನಲೆಯಲ್ಲಿ ಎಲ್ಲರೂ  ಜಾಗೃತರಾಗಿ ಕರೋನಾ ಲಸಿಕೆಯನ್ನು ಪಡೆದು  ಮುಂದಿನ ದಿನಗಳಲ್ಲಿ ಅಹಿತಕರ ಘಟನೆಯ ಜರುಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು .ಬಂಡೆಪ್ಪ ,ಬಸವರಾಜ್ ಘುಳೆ ಇನ್ನಿತರರು ಇದ್ದರು .

Comments are closed.

Don`t copy text!