Shubhashaya News

ಚಿತ್ತಾಪುರದಲ್ಲಿ ವೀಕೆಂಡ್ ಕಫ್ರ್ಯೂಗೆ ಉತ್ತಮ ಪ್ರತಿಕ್ರಿಯೆ

ಚಿತ್ತಾಪುರ: ಪಟ್ಟಣದ ಜನತಾ ಚೌಕ್‍ನಲ್ಲಿ ಪಿಎಸ್‍ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಚಿತ್ತಾಪುರ: ಕೊರೊನಾ ಎರಡನೇ ಅಲೆ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆ ಅದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಶನಿವಾರ ಹಾಗೂ ರವಿವಾರ ಸಂಪೂರ್ಣ ಜಾರಿಗೆ ತಂದಿರುವ ವೀಕೆಂಡ್ ಕಫ್ರ್ಯೂಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿಡಿತಕ್ಕೆ ಸೀಗದೇ ತನ್ನ ನಾಗಾಲೋಟ ಮುಂದುವರೆಸಿರುವ ಹಿನ್ನೆಲೆ ರಾಜ್ಯ ಸರ್ಕಾರ ಇದರ ನಿಯಂತ್ರಣಕ್ಕಾಗಿ ಹರಸಾಹಸ ಪಡುತ್ತಿದ್ದು ಅದರ ಒಂದು ಭಾಗವಾಗಿ ಕರೆ ನೀಡಲಾಗಿದ್ದ ವೀಕೆಂಡ್ ಕಫ್ರ್ಯೂಗೆ ತಾಲೂಕಿನಾದ್ಯಂತ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನಸಂಖ್ಯೆ ವಿರಳವಾಗಿತ್ತು. ಪೆಟ್ರೋಲ್ ಬಂಕ್, ಆಸ್ಪತ್ರೆ ಹಾಗೂ ಮೆಡಿಕಲ್ ಸ್ಟೋರ್‍ಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ತೆರೆನಾದ ಅಂಗಡಿ ಮುಗ್ಗಂಟ್ಟುಗಳು ಬಂದ್ ಮಾಡುವ ಮೂಲಕ ಸರ್ಕಾರದ ಆದೇಶಕ್ಕೆ ಅಂಗಡಿ ಮಾಲೀಕರು ಸಾಥ್ ನೀಡಿದರು.
ಕ್ರಷರ್, ಆಟೋಗಳಿಗೆ ಯಾವುದೇ ರೀತಿಯ ನಿರ್ಬಂಧ ಕಾಣದೇ ಸಂಚಾರ ಯಥಾಸ್ಥಿತಿಯಲ್ಲಿತ್ತು. ಖಾಸಾಗಿ ಬಸ್ ಹಾಗೂ ಸರ್ಕಾರಿ ಬಸ್‍ಗಳು ಎಂದಿನಂತೆ ಓಡಾಟ ನಡೆಸಲಿವೆ ಎಂದು ಸರ್ಕಾರ ಪ್ರಕಟಿಸಿತ್ತು. ಆದರೆ ಕಫ್ರ್ಯೂ ಜಾರಿಯಲ್ಲಿರುವ ಬಗ್ಗೆ ಮಾಹಿತಿ ಜನರಿಗೆ ಇದ್ದ ಕಾರಣ ಯಾವೊಬ್ಬ ಪ್ರಯಾಣಿಕರು ಬಸ್ ನಿಲ್ದಾಣದತ್ತ ಸುಳಿಯಲಿಲ್ಲ. ಅಗತ್ಯ ವಸ್ತು ಖರೀದಿಸಲು ಬೆಳಗ್ಗೆ 6 ರಿಂದ 10ರ ವರೆಗೆ ನೀಡಿದ್ದ ಸಮಯಾವಕಾಶದಲ್ಲಿ ಜನತೆ ಅಗತ್ಯ ವಸ್ತುಗಳನ್ನು ಖರೀದಿಸಿ ಮನೆಗೆ ಸೇರಿಕೊಂಡರು. 10ರ ನಂತರ ಪಟ್ಟಣ ಸಂಪೂರ್ಣ ಸ್ತಬ್ಧವಾಯಿತು.
ಪಟ್ಟಣದಲ್ಲಿ ಅನಗತ್ಯವಾಗಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಯುವಕರನ್ನು ಪೊಲೀಸರು ತಡೆದು ಮನೆಗೆ ಹೋಗುವಂತೆ ಸೂಚನೆ ನೀಡುತಿದ್ದ ದೃಶ್ಯ ಕಂಡು ಬಂತು. ಕಫ್ರ್ಯೂ ಹಿನ್ನೆಲೆ ಸದಾ ಜನರಿಂದ ಗಿಜಿಗುಡುತ್ತಿದ್ದ ಚಿತ್ತಾವಲಿ ಚೌಕ್, ನಾಗಾವಿ ಚೌಕ್, ಜನತಾ ಚೌಕ್, ಭುವನೇಶ್ವರಿ ಚೌಕ್, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ, ಬಸವೇಶ್ವರ ಚೌಕ್, ಸ್ಟೇಷನ್ ಪ್ರದೇಶ, ರೈಲು ನಿಲ್ದಾಣ, ಲಾಡ್ಜೀಂಗ್ ಕ್ರಾಸ್ ಮುಖ್ಯ ರಸ್ತೆಗಳಲ್ಲಿ ಜನರಿಲ್ಲದೇ ಭಣಗುತ್ತಿದ್ದವು.
ಪಿಎಸ್‍ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಪಟ್ಟಣಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿತ್ತು.

Comments are closed.

Don`t copy text!