Shubhashaya News

ಗೃಹಜ್ಯೋತಿ ದಾಖಲೆ ಪರಿಶೀಲನೆಗೆ ಗ್ರಾಹಕರು ಸಹಕರಿಸಿ: ಜೆಸ್ಕಾಂ ಮನವಿ

ಆಳಂದ: ಪಟ್ಟಣದ ತಮ್ಮ ಕಚೇರಿಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಭು ಮಡ್ಡಿತೋಟ್ ಅವರು ಮಾತನಾಡಿದರು.

ಆಳಂದ: ಕರ್ನಾಟಕ ರಾಜ್ಯ ಸರ್ಕಾರದ ನಿರ್ದೇಶನದಂತೆ ಜುಲೈ ೧ರಿಂದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಕಾರ್ಯ ಆರಂಭಗೊAಡಿದ್ದು, ಈ ವೇಳೆ ಜೆಸ್ಕಾಂ ಸಿಬ್ಬಂದಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸುವಂತೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಭು ಮಡ್ಡಿತೋಟ್ ಅವರು ಗ್ರಾಹಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಗೃಹಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳ ಮಾಹಿತಿಯನ್ನು ದೃಢೀಕರಿಸುವ ಉದ್ದೇಶದಿಂದ ಜೆಸ್ಕಾಂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಗ್ರಾಹಕರು ತಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸಿಬ್ಬಂದಿಗೆ ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.

ಜೆಸ್ಕಾಂ ಸಿಬ್ಬಂದಿ ಅಧಿಕೃತ ಗುರುತಿನ ಚೀಟಿಯೊಂದಿಗೆ ಮನೆಗಳಿಗೆ ಭೇಟಿ ನೀಡಲಿದ್ದು, ದಾಖಲೆಗಳ ಪರಿಶೀಲನೆ ವೇಳೆ ಸಾರ್ವಜನಿಕರು ಯಾವುದೇ ಅನುಮಾನಕ್ಕೆ ಅವಕಾಶ ನೀಡದೆ ಅಗತ್ಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಗೃಹಜ್ಯೋತಿ ಯೋಜನೆಯ ಸೌಲಭ್ಯ ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸರ್ಕಾರ ಈ ಪರಿಶೀಲನೆ ಕೈಗೊಂಡಿದ್ದು, ಗ್ರಾಹಕರು ಸರಿಯಾದ ಮಾಹಿತಿ ನೀಡಿ ಪರಿಶೀಲನೆ ಕಾರ್ಯವನ್ನು ಸುಗಮಗೊಳಿಸಬೇಕು ಎಂದು ಪ್ರಭು ಮಡ್ಡಿತೋಟ್ ತಿಳಿಸಿದ್ದಾರೆ.

Leave A Reply

Your email address will not be published.