ಕಲ್ಯಾಣ ಕರ್ನಾಟಕ ಪ್ರದೇಶದ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ನಿಧನಕ್ಕೆ ಆಳಂದ ತಾಲೂಕಿನ ಹಲವರು ಕಂಬನಿ ಮಿಡಿದಿದ್ದಾರೆ.
ಅವರನ್ನು ಕಳೆದುಕೊಂಡ ಈ ಭಾಗ ಒಬ್ಬ ಅನುಭವಿ, ಪ್ರಾಮಾಣಿಕ ಹಾಗೂ ಸರಳ ಸ್ವಭಾವದ ಸಜ್ಜನ ಪತ್ರಕರ್ತನನ್ನು ಕಳೆದುಕೊಂಡು ಬಡವಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ, ಆಳಂದ ಮಂಡಲ ಬಿಜೆಪಿ ಅಧ್ಯಕ್ಷ
ಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದ ಅಶೋಕ ಗುತ್ತೇದಾರ, ಮಲ್ಲಣ್ಣ ನಾಗೂರೆ, ಮಲ್ಲಿಕಾರ್ಜುನ ಕಂದಗೂಳೆ. ವೀರಣ್ಣ ಮಂಗಾಣೆ, ರಾಜಶೇಖರ ಮಲಶೆಟ್ಟಿ, ಮಲ್ಲಿಕಾರ್ಜುನ ತಡಕಲ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.