ಆಳಂದ ತಾಲೂಕಿನ ತಡಕಲ ಗ್ರಾಮದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಶಿವಲಿಂಗೇಶ್ವರ ವಿದ್ಯಾವರ್ಧಕ ಪ್ರೌಢಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ಶಾಲೆಯ 60ನೇ ವಾರ್ಷಿಕ ಸ್ನೇಹ ಸಮ್ಮೇಳನ ಫೇ. 16 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಷ. ಭ್ರ ಸಿದ್ಧಮಲ್ಲ ಶಿವಾಚಾರ್ಯರು, ಉದ್ಘಾಟನೆಯನ್ನು ಮಾಜಿ ಶಾಸಕ ಸುಭಾಷ್ ಗುತ್ತೇದಾರ ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ವಿಜಯಕುಮಾರ ಜಿ. ಎಮ್ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಕ್ರೆಪ್ಪಗೌಡ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತ ರಾಠೋಡ, ಕ್ಷೇತ್ರ ಸಮನ್ವಯಾಧಿಕಾರಿ ಶರಣಪ್ಪ ಯಂಕಂಚಿ, ಮಲ್ಲಿನಾಥ ಸ್ವಾಮಿ, ಎಂ. ಎಸ್ ಬೆಳ್ಳೆ, ಶಿವುಪುತ್ರಪ್ಪ ಬೆಳ್ಳೆ, ಗ್ರಾ. ಪಂ ಅಧುಕ್ಷೆ ನಾಗಮ್ಮಾ ಜಮಾದಾರ, ಹಣಮಂತರಾವ ದೇಗಾಂವ, ಸಂಗಮನಾಥ ಕಲಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಶ್ರೀಮಂತ ನಾಮಣೆ, ಮುಖ್ಯಗುರು ಚಂದ್ರಕಾಂತ ಕಲಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Comments are closed.