Shubhashaya News

ಜೂ.13 ರಂದು ರಾಜ್ಯದ 11 ‘ವಿಧಾನ ಪರಿಷತ್’ ಸ್ಥಾನಗಳಿಗೆ ಚುನಾವಣೆ

ವಿಧಾನಸಭೆಯಿಂದ 11 ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸೋಮವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 13ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.

ಬಿಜೆಪಿಯ 6, ಕಾಂಗ್ರೆಸ್ ನ 4 ಹಾಗೂ ಜೆಡಿಎಸ್ ನ 1 ಎಂಎಲ್ ಸಿಗಳ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಬಿಜೆಪಿಯಿಂದ ಎನ್.ರವಿಕುಮಾರ್, ಜೆಡಿಎಸ್ನಿಂದ ಬಿ.ಎಂ.ಫಾರೂಕ್ ಕಣದಲ್ಲಿದ್ದಾರೆ.

ಚುನಾವಣಾ ಆಯೋಗವು ಮೇ 27 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದೆ. ಜೂನ್ 4 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 6 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗದ ಅಧಿಸೂಚನೆ ತಿಳಿಸಿದೆ.

ಸದ್ಯದ ಬಲಾಬಲದ ಪ್ರಕಾರ ಕಾಂಗ್ರೆಸ್ 7, ಬಿಜೆಪಿ 3, ಜೆಡಿಎಸ್ 1 ಸ್ಥಾನ ಗೆಲ್ಲಬಹುದು.

ಜವರೇಗೌಡ, ಉದ್ಯಮಿಗಳಾದ ಬಿ.ಎಂ.ಫಾರೂಕ್ ಮತ್ತು ಕುಪೇಂದ್ರ ರೆಡ್ಡಿ ಅವರು ಈ ಬಾರಿಯ ಚುನಾವಣೆಯಲ್ಲಿ ಪಕ್ಷ ಗೆಲ್ಲಬಹುದಾದ ಏಕೈಕ ಸ್ಥಾನಕ್ಕಾಗಿ ರೇಸ್ ನಲ್ಲಿದ್ದಾರೆ ಎಂದು ಜೆಡಿಎಸ್ ನ ಹಿರಿಯ ಮುಖಂಡರೊಬ್ಬರು ತಿಳಿಸಿದರು.

Comments are closed.

Don`t copy text!