Shubhashaya News

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ‘ರಾಜ್ಯ ಸರ್ಕಾರಿ’ ನೌಕರರಿಗೆ ಬಿಗ್‌ಶಾಕ್‌…!

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸದ್ಯ ಸರ್ಕಾರ ಯಾವುದೇ ಸಿಹಿ ಸುದ್ದಿಯನ್ನು ನೀಡದೇ ಇರುವುದಕ್ಕೆ ಮುಂದಾಗಿದೆ. ಹೌದು, 7ನೇ ವೇತನ ಆಯೋಗದ ವರದಿ ಕುರಿತಂತೆ ಸಭೆಯಲ್ಲಿ ಪ್ರಸ್ತಾಪವಾಗಿ ಅಲ್ಪಸ್ವಲ್ಪ ಮಾತುಕತೆಯೂ ನಡೆಯಿತು. ಆದರೆ ಯಾವುದೇ ನಿರ್ಣಯ ಕೈಗೊಂಡಿಲ್ಲ” ಎಂದು ಚಿವ ಎಚ್.ಕೆ. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ಅವರು : ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ 7ನೇ ವೇತನ ಆಯೋಗದ ವರದಿ ಜಾರಿ ಸಂಬಂಧ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾದರೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಅಂಥ ಹೇಳಿದರು. ಇನ್ನೂ ರಾಜ್ಯದ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ ವರದಿ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ ಅಂಥ ಅವರು ಇದೇ ವೇಳೆ ಹೇಳಿದರು.

 

Comments are closed.

Don`t copy text!