ಉಪಚುನಾವಣೆಗೆ ಸಿದ್ಧವಾಗಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಬಸವಕಲ್ಯಾಣ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿವೆ. ಇಂದು ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸಮ್ಮುಖದಲ್ಲಿ ಸಲ್ಲಿಸಲಿದ್ದಾರೆ.
ಆದರೆ ಭಾರೀ ಪೈಪೋಟಿಯಿಂದ ಕೂಡಿದ್ದ ಬಿಜೆಪಿಯಲ್ಲಿ ಆಕಾಂಕ್ಷಿಗಳ ದಂಡೆ ಇತ್ತು ಸ್ಥಳೀಯವಾಗಿ 16 ಜನ ಅಭ್ಯರ್ಥಿಗಳು ಟಿಕೆಟ್ಗಾಗಿ ಲಾಭಿ ಮಾಡಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಭಾರತೀಯ ಜನತಾ ಪಕ್ಷವು ಕ್ಷೇತ್ರದವರಲ್ಲದ ಶರಣು ಸಲಗರ ಅವರನ್ನು ಮಣೆ ಹಾಕಿದೆ. ಶರಣು ಸಲಗರ ಕಳೆದ 4 ವರ್ಷಗಳಿಂದ ಕ್ಷೇತ್ರದಲ್ಲಿ ಬಿಡಾರ ಹೂಡಿ ಗ್ರಾಮ ಗ್ರಾಮಗಳಿಗೆ ತೆರಳಿ ಪರಿಚಯ ಮಾಡಿಕೊಂಡು ಪ್ರತಿಯೊಂದು ಗ್ರಾಮದಲ್ಲಿ ಕಾರ್ಯಕರ್ತರು ಮತ್ತು ಮುಖಂಡರನ್ನು ತಯಾರು ಮಾಡಿದ್ದರು. ಅಂತಿಮವಾಗಿ ಇವರ ಶ್ರಮವನ್ನು ಗುರುತಿಸಿದ ಭಾರತೀಯ ಜನತಾ ಪಕ್ಷವು ಅಳೆದು ತೂಗಿ ಶರಣು ಸಲಗರ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಅದರಂತೆ ನಿರೀಕ್ಷೆಯಂತೆ ಬಿಜೆಪಿಯು ಮಸ್ಕಿಯಲ್ಲಿ ಪ್ರತಾಪಗೌಡರಿಗೆ ಟಿಕೆಟ್ ಘೋಷಿಸಿದೆ, ಇನ್ನೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪತ್ನಿ ಮಂಗಳಾ ಸುರೇಶ ಅಂಗಡಿಯನ್ನು ಕಣಕ್ಕಿಳಿಸಿದೆ.
Comments are closed.