ಲಿಂಗಸುಗೂರು ತಾಲೂಕಿನ ಗುರುಗುಂಟಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನೀರಿಗಾಗಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಬೇಟಿ ನೀಡಿ ಮಾತುಕತೆ ನಡೆಸಿದರು.
ಲಿಂಗಸುಗೂರು/ಗುರುಗುಂಟಾ :
ಬಸವಸಾಗರ ಜಲಾಶಯದ ಬಲದಂಡೆ ಕಾಲುವೆ ಅಚ್ಚುಕಟ್ಟು ಪ್ರದೇಶಕ್ಕೆ ಏಪ್ರಿಲ್ 20ರ ವರಗೆ ನೀರು ಹರಿಸಬೇಕೆಂದು ತಾಲೂಕಿನ ಗುರುಗುಂಟಾದ ರಾಷ್ಟ್ರೀಯ ಹೆದ್ದಾರಿ ಬಳಿ ರೈತರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಸೋಮವಾರ ಬೇಟಿ ನೀಡಿದರು.
ಧರಣಿ ನಿರತರ ಉದ್ದೇಶಿಸಿ ಮಾತನಾಡಿದ ಸಂಸದ ರಾಜಾ ಅಮರೇಶ್ವರ ನಾಯಕ, ತಕ್ಷಣವೇ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಆಣೆಕಟ್ಟೆಯಲ್ಲಿ ನೀರಿನ ಲಭ್ಯತೆ ಅರಿತು ನೀರು ಬಿಡಿಸಲಾಗುವುದು ರೈತರ ಜಮೀನುಗಳಿಗೆ ನೀರು ಬಿಡುವ ಕುರಿತು ನಾನೂ ಹಾಗೂ ಶಾಸಕರಾದ ಕೆ.ಶಿವನಗೌಡ ನಾಯಕ, ರಾಜುಗೌಡರು ನೀರಾವರಿ ಸಲಹಾ ಸಮಿತಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಚರ್ಚಿಸುತ್ತಿದ್ದಾರೆ ಎಂದು ಹೇಳಿದರು.
ಏಪ್ರಿಲ್ 20ರ ವರೆಗೆ ನೀರು ಹರಿಸಲು ಕಷ್ಟಕರವಾಗಬಹುದು ಆದರೆ ವಾರ ಹತ್ತು ದಿವಸಗಳ ಕಾಲೆ ನೀರು ಹರಿಸುವಂತೆ ಸಂಬಂಧಿಸಿದ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳೊಂದಿಗೆ ಮಾತನಾಡಿ ನೀರು ಬಿಡಿಸಲಾಗುವುದು. 20 ದಿನಗಳ ವರಗೆ ಎಂದರೆ ಕಷ್ಟಕರವಾಗುತ್ತದೆ. ನೀರಿನ ಲಭ್ಯತೆ ಇದ್ದರೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
Comments are closed.